ಅಮಾಯಕ ಹಿಂದೂ ಯುವಕರ ಮೇಲೆ ಪೊಲೀಸ್ ದಬ್ಬಾಳಿಕೆ ಆರೋಪ ► ಕಡಬ ಬಂದ್ ಯಶಸ್ವಿ

(ನ್ಯೂಸ್ ಕಡಬ) newskadaba.com ಕಡಬ, ಅ.28. ಅಮಾಯಕ ಹಿಂದೂ ಯುವಕರ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಹಿಂದೂಪರ ಸಂಘಟನೆಗಳು ನೀಡಿದ್ದ ಕಡಬ ಬಂದ್ ಗೆ ಪೂರ್ಣ ಬೆಂಬಲ ವ್ಯಕ್ತವಾಗಿದ್ದು, ಕಡಬ ಪರಿಸರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ವ್ಯಾಪಾರಸ್ಥರು ಬೆಂಬಲಿಸಿದ್ದಾರೆ.

ಕಡಬದಲ್ಲಿ ಈ ಹಿಂದೆ ಮಕ್ಕಾ ಮಸೀದಿಯ ಅವಹೇಳನ ನಡೆಸಿರುವ ಪ್ರಕರಣದಲ್ಲಿ ಆರೋಪಿಯನ್ನು ಹಿಂದೂ ಸಂಘಟನೆಯ ಮುಖಂಡರೇ ಠಾಣೆಗೆ ಒಪ್ಪಿಸಿದ್ದರೂ ಅಮಾಯಕ ಹಿಂದೂ ಕಾರ್ಯಕರ್ತರನ್ನು ಪೊಲೀಸರು ಪ್ರಕರಣದಲ್ಲಿ ಸಿಲುಕಿಸುತ್ತಿದ್ದಾರೆ‌. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಗೆ ಸಹಕಾರ ನೀಡುತ್ತಿದ್ದರೂ ಪ್ರಕರಣಕ್ಕೆ ಸಂಬಂಧಪಡದ ವ್ಯಕ್ತಿಗಳನ್ನು ಪ್ರಕರಣದಲ್ಲಿ ಸೇರ್ಪಡೆಗೊಳಿಸುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿ ಪೊಲೀಸ್ ಇಲಾಖೆಯ ದ್ವಿಮುಖ ನೀತಿಯ ವಿರುದ್ಧ ಕಡಬ ಬಂದ್ ಗೆ ಕರೆ ನೀಡಲಾಗಿದೆ. ಹೆಚ್ಚಿನ
ಜೀಪು, ಟೆಂಪೋ, ‌ರಿಕ್ಷಾ ಚಾಲಕರು ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದು, ಕೆಲವು ವಾಹನಗಳು ಬಾಡಿಗೆ ನಡೆಸುತ್ತಿದೆ.

error: Content is protected !!

Join the Group

Join WhatsApp Group