ಸುಳ್ಯ ವಿಖಾಯ ತಂಡದಿಂದ ಕಲ್ಲುಗುಂಡಿ ಪೇಟೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) Newskadaba.com ಸುಳ್ಯ, ಜೂ. 25. ಸುಳ್ಯ ವಲಯ ವಿಖಾಯ ತಂಡ ಹಾಗೂ ಸಂಪಾಜೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಸಂಪಾಜರ ಗ್ರಾಮದ ಕಲ್ಲುಗುಂಡಿ ಪೇಟೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡಯಿತು. ಈ ಕಾರ್ಯಕ್ರಮಕ್ಕೆ ದುಆ ಮೂಲಕ ಚಾಲನೆ ನೀಡಿದ ಕಲ್ಲುಗುಂಡಿ ಜುಮಾ ಮಸೀದಿಯ ಖತೀಬರಾದ ನಯೀಮ್ ಫೈಝಿ ಮುಕ್ವೆ ಸ್ವಚ್ಛತೆ ಇಸ್ಲಾಮಿನ ಬಾಗವಾಗಿದೆ ಎಂದರು.

ಕಲ್ಲುಗುಂಡಿ ಜುಮಾ ಮಸೀದಿಯ ಅಧ್ಯಕ್ಷರಾದ ಅಬ್ಬಾಸ್ ಸೆಂಟ್ಯಾರ್ ಮಾತನಾಡಿ, ವಿಖಾಯ ತಂಡವು ಜಿಲ್ಲೆಯಲ್ಲಿ ಮಾಡುತ್ತಿರುವ ಸೇವೆಯ ಕುರಿತು ವಿವರಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಸುಳ್ಯ ಸುನ್ನೀ ಮಹಲ್ ಫೆಡರೇಷನ್ ಅಧ್ಯಕ್ಷರಾದ ಖತ್ತರ್ ಇಬ್ರಾಹಿಂ ಹಾಜಿ, ಸುಳ್ಯ ಮದ್ರಸಾ ಮೆನೇಜ್ಮೆಂಟ್ ಅಧ್ಯಕ್ಷರಾದ ತಾಜ್ ಮಹಮ್ಮದ್ ಸಂಪಾಜೆ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ.ಕೆ.ಹಮೀದ್, ಸದಸ್ಯರಾದ ಎಸ್.ಕೆ. ಹನೀಫ್, ಸವಾದ್ ಗೂನಡ್ಕ, ಅಬೂಸಾಲಿ ಗೂನಡ್ಕ ಹಾಗೂ ಜಗದೀಶ್ ರೈ ಮೊದಲಾದವರು ಉಪಸ್ಥಿತರಿದ್ದರು. ನಂತರ ಕಲ್ಲುಗುಂಡಿ ಮಸೀದಿ ಬಳಿಯಿಂದ ಕೂಲಿಶೆಡ್ ಆಗಿ ಚರ್ಚ್ ವರೆಗೆ ರಸ್ತೆಯ ಎರಡೂ ಕಡೆ ಚರಂಡಿ ಶುಚಿಗೊಳಿಸಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಲಿಸ್ಸಿ ಮೊನಾಲಿಸ ಕಾರ್ಯಕರ್ತರೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಬಾಗಿಯಾದರು. ಎಸ್.ಅಲಿ ಹಾಜಿಯವರ ವತಿಯಿಂದ ಮದ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿತ್ತು.
ಅಜ್ಜಾವರ, ಮಂಡೆಕೋಲು, ಸುಣ್ಣಮೂಲೆ, ಎಲಿಮಲೆ, ಸುಳ್ಯ ಹಾಗೂ ಗೂನಡ್ಕದ ವಿಖಾಯ ಕಾರ್ಯಕರ್ತರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಬಾಗವಹಿಸಿದ್ದರು.

Also Read  ಲಾಕ್ ಡೌನ್ ಎಫೆಕ್ಟ್ ➤ 40 ಬಡ ಕುಟುಂಬಗಳಿಗೆ ಅಗತ್ಯ ಸಾಮಗ್ರಿ ನೀಡಿದ ಪ್ರಕಾಶ್ ಎನ್.ಕೆ.

error: Content is protected !!
Scroll to Top