ರೈಲಿನಡಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)Newskadaba.com ಚನ್ನಪಟ್ಟಣ, ಜೂ. 27. ಯುವಕನೋರ್ವ ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಚೆನ್ನಪಟ್ಟಣ ಹೊರವಲಯದ ತಿಟ್ಟಮಾರನಹಳ್ಳಿ ಎಂಬಲ್ಲಿ ನಡೆದಿದೆ.

ಆತ್ಮಹತ್ಯೆಗೈದ ಯುವಕನನ್ನು ಸುಖೇಶ್ (19) ಎಂದು ಗುರುತಿಸಲಾಗಿದೆ. ಈತ ಸುಖೇಶ್ ಮೈಸೂರಿನ ಕಾಲೇಜೊಂದರಲ್ಲಿ ಎಲ್.ಎಲ್.ಬಿ ವಿದ್ಯಾರ್ಥಿಯಾಗಿದ್ದ ಎನ್ನಲಾಗಿದೆ. ಚನ್ನಪಟ್ಟಣಕ್ಕೆ ಹೋಗಿಬರುತ್ತೇನೆ ಎಂದು ಹೇಳಿಹೋಗಿದ್ದ ಈತ ಮೈಸೂರು ಕಡೆಯಿಂದ ಬಂದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಚನ್ನಪಟ್ಟಣ ರೈಲ್ವೆ ಉಪ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಮಂಗಳೂರು: ಶ್ರೀದೇವಿ ಕಾಲೇಜ್ ಆಫ್ ನರ್ಸಿಂಗ್ ಗೆ ಹಲವು ರ್ಯಾಂಕ್ ಗಳು

error: Content is protected !!
Scroll to Top