ಬೆಳ್ತಂಗಡಿ: ಕಾರುಗಳ ಮಧ್ಯೆ ಢಿಕ್ಕಿ ► ಇಬ್ಬರು ಮೃತ್ಯು, ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.29. ಕಾರುಗಳೆರಡರ ನಡುವೆ ಮುಖಾಮುಖಿ ಢಿಕ್ಕಿಯುಂಟಾದ ಪರಿಣಾಮ ಇಬ್ಬರು ಮೃತಪಟ್ಟು,‌ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ಸಮೀಪದ ಗರಡಾಡಿ ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ.

ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೃತಪಟ್ಟವರನ್ನು ಗುರುವಾಯನಕೆರೆ ಸಮೀಪದ ಕುವೆಟ್ಟು ನಿವಾಸಿಗಳಾದ ವಿನಾಯಕ ಹಾಗು ವಿಶ್ವಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

Also Read  ತಹಶೀಲ್ದಾರ್‌ ಕಚೇರಿಯಲ್ಲಿ ಸಿಬ್ಬಂದಿ ಆತ್ಮಹತ್ಯೆಗೆ ಶರಣು..!

error: Content is protected !!
Scroll to Top