ಮಂಗಳೂರಿನಲ್ಲಿ ಒಂದು ವೈಶಾಚಿಕ ಕೃತ್ಯ ➤ ಗುಂಡು ಹೊಡೆದು ಬೀದಿನಾಯಿ ಹತ್ಯೆ

(ನ್ಯೂಸ್ ಕಡಬ) newskadaba,ಮಂಗಳೂರು ಜು.02: ಬೀದಿನಾಯಿಯೊಂದನ್ನು ಅಮಾನವೀಯವಾಗಿ ಗುಂಡು ಹೊಡೆದು ಹತ್ಯೆ ಮಾಡಿರುವ ಹೇಯ ಕೃತ್ಯವೊಂದು ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಇತ್ತೀಚೆಗೆ ನಾಯಿಯನ್ನು ಬೈಕ್ ಗೆ ಕಟ್ಟಿ ಅಮಾನವೀಯವಾಗಿ ಎಳೆದೊಯ್ದ ಎರಡು ಪ್ರಕರಣಗಳು ಮಂಗಳೂರಿಗೆ ಕಪ್ಪು ಚುಕ್ಕೆಯಾಗಿ ಪರಿಣಮಿಸಿತ್ತು. ಅದರ ಬೆನ್ನಲ್ಲೇ ನಡೆದ ಈ ಕೃತ್ಯದಿಂದ ಎಲ್ಲರೂ ತಲೆತಗ್ಗಿಸುವಂತಾಗಿದೆ.

ಮಂಗಳೂರು ನಗರದ ಶಿವಭಾಗ್‍ನ‌ ಬಳಿಯಿರುವ ಆಭರಣ ಜ್ಯುವೆಲ್ಲರ್ಸ್ ಮಳಿಗೆಯ ಹಿಂಭಾಗದ ರಸ್ತೆಯಲ್ಲಿ ಗುಂಡು ಹೊಡೆಸಿಕೊಂಡು ಬೀದಿ ನಾಯಿಯೊಂದನ್ನು ಸತ್ತು ಬಿದ್ದಿತ್ತು. ತಕ್ಷಣ ಸ್ಥಳಕ್ಕೆ ಭೇಟಿ ನೀಡಿರುವ ಅನಿಮಲ್ ಕೇರ್ ಟ್ರಸ್ಟ್ ನ ಕಾರ್ಯಕರ್ತರು ಮೃತ ನಾಯಿಯನ್ನು ಪಶು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆಸ್ಪತ್ರೆಯಲ್ಲಿ ನಾಯಿಯ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ನಾಯಿಯ ದೇಹದಲ್ಲಿ ಬುಲೆಟ್ ದೊರೆತಿದೆ. ಈ ಬಗ್ಗೆ ಸ್ಥಳೀಯ ವ್ಯಕ್ತಿಯೋರ್ವರ ಮೇಲೆ ಶಂಕೆ ವ್ಯಕ್ತವಾಗಿದೆ.ಘಟನೆಯ ಬಗ್ಗೆ ಅನಿಮಲ್ ಕೇರ್ ಟ್ರಸ್ಟ್ ನ ಮುಖ್ಯಸ್ಥೆ ಸುಮಾ ರಮೇಶ್ ಅವರು ಕದ್ರಿ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.‌

error: Content is protected !!
Scroll to Top