ಕೆಎಸ್ಸಾರ್ಟಿಸಿ ಬಸ್ – ಕಾರು ಮಧ್ಯೆ ಮುಖಾಮುಖಿ ಢಿಕ್ಕಿ ➤ ಓರ್ವ ಮೃತ್ಯು, ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು.06. ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಅಪಘಾತದಲ್ಲಿ ಕುಂಬಳೆ ನಿವಾಸಿಯೋರ್ವರು ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಸೋಮವಾರ ರಾತ್ರಿ ಕಾಞಂಗಾಡ್ ನಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಕುಂಬಳೆ ಸಮೀಪದ ಅರಿಕ್ಕಾಡಿ ನಿವಾಸಿ ಅಲಿ (32) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನೀಲೇಶ್ವರದಿಂದ ಕಾಞಂಗಾಡ್ ಗೆ ತೆರಳುತ್ತಿದ್ದ ಬಸ್ ಮತ್ತು ಕುಂಬಳೆಯಿಂದ ಕಣ್ಣೂರಿಗೆ ತೆರಳುತ್ತಿದ್ದ ಕಾರು ನಡುವೆ ಕಾಞಂಗಾಡ್ ಸಮೀಪ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಹೊಸದುರ್ಗ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Also Read  ಗ್ರಾಮ ಪಂಚಾಯತ್ ಚುನಾವಣೆ ➤ ಡಿಸೆಂಬರ್ 22 ರಂದು ವೇತನ ಸಹಿತ ರಜೆ

 

 

error: Content is protected !!
Scroll to Top