ಉಳ್ಳಾಲ: ಅಕ್ರಮ ಮರಳು ಸಾಗಾಟ ➤ ಓರ್ವ ಅರೆಸ್ಟ್

(ನ್ಯೂಸ್ ಕಡಬ) Newskadaba.com ಉಳ್ಳಾಲ, ಜು. 07. ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಲಾರಿ ಹಾಗೂ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಕೋಟೆಪುರದಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಕೋಟೆಪುರ ನಿವಾಸಿ ಶೌಕತ್ (35) ಎಂದು ಗುರುತಿಸಲಾಗಿದೆ. ಉಳಿದ ಆರೋಪಿಗಳು ತಪ್ಪಿಸಿಕೊಂಡಿದ್ದು, ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ ಎನ್ನಲಾಗಿದೆ. ಪೊಲೀಸರ ದಾಳಿ ಸಂದರ್ಭದಲ್ಲಿ ನಾಲ್ಕು ಲಾರಿಗಳಲ್ಲಿ ಮರಳು ತುಂಬಿಸಿಡಲಾಗಿತ್ತು, ಅಲ್ಲದೇ ಘಟನಾ ಸ್ಥಳದಲ್ಲಿ ಆರೋಪಿಗಳು ಮೂರು ಲೋಡು ಮರಳು ಶೇಖರಣೆ ಮಾಡಿಟ್ಟಿದ್ದರು. ಇದೀಗ ದಾಳಿ ನಡೆಸಿದ ಪೊಲೀಸರು ಮರಳು ಸಹಿತ ನಾಲ್ಕು ಲಾರಿ ಹಾಗೂ ಎರಡು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದು, 15 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ವಿಮಾನಗಳಿಗೆ ಬಾಂಬ್‌ ಬೆದರಿಕೆ- ಮೂವರು ವಶಕ್ಕೆ

error: Content is protected !!
Scroll to Top