ನೆಲ್ಯಾಡಿ: ಜನರೇಟರ್ ಸಾಗಾಟದ ಲಾರಿ ಪಲ್ಟಿ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.07. ಜನರೇಟರ್ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಎಂಜಿರ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.

ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯು ಎಂಜಿರ ಎಂಬಲ್ಲಿ ರಸ್ತೆ ಬದಿಯ ಕಮರಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಲಾರಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಉಡುಪಿ: ಡ್ರಗ್ಸ್ ಜಾಲದಲ್ಲಿ ಸಿಲುಕಿದ್ದ 42 ವಿದ್ಯಾರ್ಥಿಗಳು ಅಮಾನತು !!         ➤  ಮಣಿಪಾಲ್ ಹಾಸ್ಟೆಲ್​ ರೂಂನಲ್ಲಿ ರಾಶಿ ರಾಶಿ ಕಾಂಡೋಮ್ ಪತ್ತೆ

 

 

 

error: Content is protected !!
Scroll to Top