ಹೆಂಡತಿಯನ್ನು ತವರಿನಲ್ಲಿ ಬಿಟ್ಟ ಪತಿ ಮಹಾಶಯ ➤ ನಾದಿನಿಯೊಂದಿಗೆ ಪರಾರಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು.10. ಪತಿ ಮಹಾಶಯನೋರ್ವ ತನ್ನ ಹೆಂಡತಿಯನ್ನು ತವರಿನಲ್ಲಿ ಬಿಟ್ಟು ನಾದಿನಿಯೊಂದಿಗೆ ಪರಾರಿಯಾದ ಘಟನೆ ಬೆಳ್ತಂಗಡಿಯಿಂದ ವರದಿಯಾಗಿದೆ.

ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಸಮೀಪದ ಕೈಕಂಬ ನಿವಾಸಿ ಮಹಮ್ಮದ್‌ ಎಂಬವರ ಪುತ್ರಿಯನ್ನು 9 ತಿಂಗಳ ಹಿಂದೆ ಮುಸ್ತಫಾ ಎಂಬಾತನಿಗೆ ವಿವಾಹ ಮಾಡಿಕೊಡಲಾಗಿದ್ದು, ಇತ್ತೀಚೆಗೆ ದಂಪತಿಯ ನಡುವೆ ಮನಸ್ತಾಪ ಉಂಟಾಗಿದೆ ಎನ್ನಲಾಗಿದೆ. ಈ ನಡುವೆ ತನ್ನ ಪತ್ನಿಯ ತಂಗಿಯ ಜೊತೆ ಸಲುಗೆಯಿಂದಿದ್ದ ಮುಸ್ತಫಾ, ಗುರುವಾರದಂದು ತನ್ನ ಪತ್ನಿಯನ್ನು ಬಿಟ್ಟು ನಾದಿನಿಯ ಜೊತೆ ಪರಾರಿಯಾಗಿದ್ದಾನೆ ಎನ್ನಲಾಗಿದೆ. ತನ್ನ ಕಿರಿಯ ಪುತ್ರಿ ಇದುವರೆಗೆ ಮನೆಗೆ ವಾಪಾಸ್ಸಾಗದೇ ಕಾಣೆಯಾಗಿದ್ದಾಳೆ ಎಂದು ಯುವತಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.

Also Read  ಕವಿ, ನಾಟಕಕಾರ, ಯಕ್ಷಗಾನ ಪ್ರಸಂಗಕರ್ತ ಅಂಬಾತನಯ ಮುದ್ರಾಡಿ ನಿಧನ

 

 

error: Content is protected !!
Scroll to Top