ಮಂಗಳೂರು: ಮೀನುಗಾರನ ಬಲಿ ಪಡೆದ ಮೀನು ಹಿಡಿಯುವ ಬಲೆ ➤ ಮೀನು ಹಿಡಿಯುತ್ತಿದ್ದ ವೇಳೆ ದುರ್ಘಟನೆ

(ನ್ಯೂಸ್ ಕಡಬ) Newskadaba.com ಮಂಗಳೂರು, ಜು. 16. ಮೀನುಗಾರನೋರ್ವ ಬಲೆ ಹಾಕಿ ಮೀನು ಹಿಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಅಳಿವೆಬಾಗಿಲಿನಲ್ಲಿ ನಡೆದಿದೆ.


ಮೃತರನ್ನು ತೋಟಬೆಂಗ್ರೆ ನಿವಾಸಿ ಜಯಪುತ್ರನ್ (55) ಎಂದು ಗುರುತಿಸಲಾಗಿದೆ. ಇವರು ಅಳಿವೆಬಾಗಿಲಿನ ಸಮೀಪ ಮೀನು ಹಿಡಿಯುತ್ತಿದ್ದ ವೇಳೆ ಭಾರೀ ಗಾಳಿ- ಮಳೆ ಸುರಿದಿದ್ದು, ಈ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದಿದ್ದರು. ಈ ಸಂದರ್ಭದಲ್ಲಿ ಇವರ ಕಾಲಿಗೆ ಮೀನು ಹಿಡಿಯುವ ಬಲೆ ಸಿಲುಕಿದ್ದರಿಂದ ಈಜಲಾಗದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ತುಂಬಾ ಹೊತ್ತಾದರೂ ಇವರು ಮನೆಗೆ ಬಾರದೇ ಇದ್ದಾಗ ಆತಂಕಗೊಂಡ ಕುಟುಂಬಿಕರು ಹುಡುಕಾಡಿದಾಗ ಕಸಬ ಬೆಂಗ್ರೆ ಸಮೀಪ ಅವರ ಮೃತದೇಹ ಪತ್ತೆಯಾಗಿದೆ. ಈ ಕುರಿತು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಉಜಿರೆ: ನಾಪತ್ತೆಯಾಗಿದ್ದ ನಿವೃತ್ತ ಮುಖ್ಯೋಪಾಧ್ಯಾಯರ ಮೃತದೇಹ ಬಿಸಿಲೆ ಘಾಟ್ ಬಳಿ ನದಿಯಲ್ಲಿ ಪತ್ತೆ

error: Content is protected !!
Scroll to Top