ಸಿನಿಮೀಯ ಶೈಲಿಯಲ್ಲಿ ಕಾರು ಪಲ್ಟಿ ➤ ಚಾಲಕ ಅದೃಷ್ಟವಶಾತ್ ಪಾರು

(ನ್ಯೂಸ್ ಕಡಬ) newskadaba.com ಸುಳ್ಯ, ಜು.18. ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಡಿಸೈರ್ ಕಾರೊಂದು ರಸ್ತೆ ಬದಿಯ ಕಬ್ಬಿಣದ ಬೇಲಿಗೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದೆ.

ಬೆಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರು ಅಡ್ಕಾರಿನ ಅಯ್ಯಪ್ಪ ಮಂದಿರದ ಬಳಿ ತಲುಪುತ್ತಿದ್ದಂತೆ ಚಾಲಕನಿಗೆ ನಿದ್ದೆ ತೂಕಡಿಸಿದ್ದರಿಂದ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿಣದ ತಡೆಬೇಲಿಗೆ ಢಿಕ್ಕಿ ಹೊಡೆದು ರಸ್ತೆಗೆ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕಾರು ಸಂಪೂರ್ಣ ಜಖಂಗೊಂಡಿದೆ.

Also Read  ಕಲ್ಲಡ್ಕ: ಟ್ಯಾಂಕರ್ - ಸ್ಕೂಟರ್ ನಡುವೆ ಢಿಕ್ಕಿ➤ ಸವಾರ ಸ್ಥಳದಲ್ಲೇ ಮೃತ್ಯು

 

 

 

error: Content is protected !!
Scroll to Top