ಸುಳ್ಯ: ಮರ ಬಿದ್ದು ರಸ್ತೆ ತಡೆ- ವಿದ್ಯುತ್ ಕಂಬಗಳಿಗೆ ಹಾನಿ

(ನ್ಯೂಸ್ ಕಡಬ) Newskadaba.com ಅರಂತೋಡು, ಜು. 23. ಬೃಹತ್ ಮರವೊಂದು ರಸ್ತೆಗೆ ಬಿದ್ದು ವಿದ್ಯುತ್ ಕಂಬಗಳಿಗೆ ಹಾನಿಯಾದ ಘಟನೆ ಪೆತ್ತಾಜೆ ಎಂಬಲ್ಲಿ ನಡೆದಿದೆ. ಮರವನ್ನು ತೆರವುಗೊಳಿಸುವ ಕಾರ್ಯದಲ್ಲಿ ಅರಂತೋಡು ಗ್ರಾಮ ಪಂಚಾಯತ್ ಸದಸ್ಯ ವೇಣು, ತೊಡಿಕಾನ ದೇವಸ್ಥಾನ ಮ್ಯಾನೇಜರ್ ಆನಂದ ಕಲ್ಲಗದ್ದೆ, ತೊಡಿಕಾನ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವ ಕೊಳಲುಮೂಲೆ, ಗುರು ನಾರ್ಕೋಡು ಸೇರಿದಂತೆ ಕಲ್ಲಗದ್ದೆ ಜನರು ಸಹಕರಿಸಿದರು.

Also Read  ವಿಟ್ಲ: ಕಾಲು ಜಾರಿಗೆ ಕೆರೆಗೆ ಬಿದ್ದು ಮಗು ಮೃತ್ಯು

error: Content is protected !!
Scroll to Top