ಕಡಬ: ಹುಚ್ಚು ನಾಯಿ ಕಡಿತ ➤ ವ್ಯಕ್ತಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಜು.23. ಹುಚ್ಚು ನಾಯಿಯೊಂದು ವ್ಯಕ್ತಿಯೋರ್ವರಿಗೆ ಕಚ್ಚಿ ಗಾಯಗೊಳಿಸಿದ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆಯಿಂದ ವರದಿಯಾಗಿದೆ.

ಕಲ್ಲುಗುಡ್ಡೆ ಪೇಟೆಯಲ್ಲಿ ಗುರುವಾರ ರಾತ್ರಿಯಿಂದಲೇ ಹುಚ್ಚು ನಾಯಿಯೊಂದು ಓಡಾಟ ನಡೆಸುತ್ತಿದ್ದು, ಪೇಟೆ, ಕಾಲೋನಿ ಸಹಿತ ಇತರೆಡೆ ಓಡಾಟ ನಡೆಸಿ ಆತಂಕ ಸೃಷ್ಟಿ ಮಾಡಿತ್ತು. ಮನೆಯಲ್ಲಿನ ಸಾಕು ನಾಯಿಗಳ ಮೇಲೆಯೂ ದಾಳಿ ನಡೆಸಿದ್ದು, ಶುಕ್ರವಾರ ಬೆಳಗ್ಗೆ ಹುಚ್ಚು ನಾಯಿಯು ಪೇಟೆಯಲ್ಲಿ ಸುತ್ತಾಡುತ್ತಾ ವ್ಯಕ್ತಿಯೋರ್ವರ ಕಾಲಿಗೆ ಕಚ್ಚಿದ ಪರಿಣಾಮ ಗಾಯಗೊಂಡ ವ್ಯಕ್ತಿಯು ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದಿದ್ದಾರೆ. ಕಲ್ಲುಗುಡ್ಡೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಈ ಬಗ್ಗೆ ಸ್ಥಳೀಯಾಡಳಿತ ಕ್ರಮ ಕೈಗೊಳ್ಳುವಂತೆಯೂ ಸಾರ್ವಜನಿಕರು ಆಗ್ರಹಿಸಿದ್ದಾರೆ.

Also Read  ಉಡುಪಿ: ಶ್ರೀಕೃಷ್ಣ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ

 

 

 

error: Content is protected !!
Scroll to Top