ಸೊಪ್ಪು ತರಲೆಂದು ತೆರಳಿದ ಮಹಿಳೆ ಗುಂಡ್ಯ ಹೊಳೆಗೆ ಹಾರಿದ ಶಂಕೆ ➤ ಅಗ್ನಿಶಾಮಕ ಸಿಬ್ಬಂದಿಗಳಿಂದ ನದಿಯಲ್ಲಿ ಹುಡುಕಾಟ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.31. ಸೊಪ್ಪು ತರಲೆಂದು ತೆರಳಿದ ಮಹಿಳೆಯೋರ್ವರು ನಾಪತ್ತೆಯಾಗಿರುವ ಘಟನೆ ಕಡಬ ತಾಲೂಕಿನ ರೆಖ್ಯಾ ಗ್ರಾಮದ ನೇಲ್ಯಡ್ಕ ಎಂಬಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.

ನಾಪತ್ತೆಯಾದ ಮಹಿಳೆಯನ್ನು ನೇಲ್ಯಡ್ಕ‌ ಸಮೀಪದ ಉರ್ನಡ್ಕ ನಿವಾಸಿ ಸುಂದರ ಗೌಡ ಎಂಬವರ ಪತ್ನಿ ಶಕುಂತಲಾ ಎಂದು ಗುರುತಿಸಲಾಗಿದೆ. ಶಕುಂತಲಾ ಅವರು ಶನಿವಾರ ಬೆಳಿಗ್ಗೆ ಸೊಪ್ಪು ತರಲೆಂದು ಮನೆಯಿಂದ ತೆರಳಿದ್ದು, ಮನೆಯ ಪಕ್ಕದಲ್ಲಿ ಹರಿಯುವ ಗುಂಡ್ಯ ಹೊಳೆಯ ಸಮೀಪ ಅವರ ಚಪ್ಪಲಿ ದೊರೆತಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಅದಕ್ಕೂ ಮೊದಲು ಹಿರಿಯ ಮಗನಿಗೆ ಕರೆ ಮಾಡಿ ಕಿರಿಯ ಮಗನ ಮದುವೆಯ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗಿದ್ದು, ಆ ನಂತರ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಭೇಟಿ‌ ನೀಡಿ ನದಿಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ.

Also Read  ಕೊಂದಪಡೆ ಶ್ರೀ ಅನಂತಪದ್ಮನಾಭೇಶ್ವರ ದೇವಳದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ವಿಶೇಷ ಪೂಜೆ

 

 

 

error: Content is protected !!
Scroll to Top