ಕೆಟಿಎಮ್ ಬೈಕ್ – ಕಾರು ನಡುವೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು, ಸಹ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಸಕಲೇಶಪುರ, ಆ.02. ಕೆಟಿಎಮ್ ಬೈಕ್ ಹಾಗೂ ಕಾರಿನ ನಡುವೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಕಲೇಶಪುರ ಸಮೀಪ ಸೋಮವಾರದಂದು ನಡೆದಿದೆ.

ಸಕಲೇಶಪುರ ಸಮೀಪದ ಬ್ಯಾಕರವಳ್ಳಿ ಎಂಬಲ್ಲಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಬೈಕ್ ಸವಾರ ಸಕಲೇಶಪುರದ ಬಾಲಗದ್ದೆ ನಿವಾಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ‌. ಗಂಭೀರ ಗಾಯಗೊಂಡಿರುವ ಸಹ ಸವಾರನನ್ನು ಸಕಲೇಶಪುರ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸಕಲೇಶಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ? ರಾಜ್ಯದಲ್ಲಿ ನಿಲ್ಲದ ಕೊರೋನಾ ಅಟ್ಟಹಾಸ ಇಂದೇ ನಿರ್ಧಾರವಾಗುತ್ತಾ ಲಾಕ್-ಡೌನ್..❓ ➤ ಲಾಕ್-ಡೌನ್ ಆದಲ್ಲಿ ಶಾಲಾ-ಕಾಲೇಜುಗಳಿಗೆ ಬೀಳಲಿದೆ ಬ್ರೇಕ್..‼️

 

 

 

 

error: Content is protected !!
Scroll to Top