ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು ದೇವಸ್ಥಾನಗಳಲ್ಲಿ ಸೇವೆ ಸ್ಥಗಿತ ➤ ಕೊರೋನಾ ಏರಿಕೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.04. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಸಿದ್ಧ ಧಾರ್ಮಿಕ ಕೇಂದ್ರಗಳಾದ ಕುಕ್ಕೇ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳ ಮಂಜುನಾಥ ಸನ್ನಿಧಿಯಲ್ಲಿ ಮುಂದಿನ ಆದೇಶದವರೆಗೆ ಸೇವೆಗಳನ್ನು ಸ್ಥಗಿತಗೊಳಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ನೆರೆಯ ಕೇರಳ ರಾಜ್ಯದಲ್ಲಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚಳವಾಗುತ್ತಿದ್ದು, ಹೊರ ಜಿಲ್ಲೆ, ರಾಜ್ಯದವರು ಇಲ್ಲಿಗೆ ತೀರ್ಥಯಾತ್ರೆ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಇಂದಿನಿಂದ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳ ದೇವಸ್ಥಾನದಲ್ಲಿ ಸೇವೆಗಳನ್ನು ಸ್ಥಗಿತ ಮಾಡಿ ಆದೇಶದಲ್ಲಿ ತಿಳಿಸಲಾಗಿದೆ.

Also Read  ಮತ್ತೆ ಚಿನ್ನದ ಬೆಲೆ ಇಳಿಕೆ

 

 

 

 

error: Content is protected !!
Scroll to Top