ರೈಲಿನಡಿಗೆ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಆ.07. ರೈಲಿನಡಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಮಂಗಳೂರು – ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದ ನಡುವಿನ ಎಡಮಂಗಲದಲ್ಲಿ ಶನಿವಾರ ಸಂಜೆ ನಡೆದಿದೆ.

ಮೃತ ಯುವಕನನ್ನು ಕಡಬ ತಾಲೂಕು ಎಡಮಂಗಲ ನಿವಾಸಿ ಭರತ ಎಂದು ಗುರುತಿಸಲಾಗಿದೆ. ಭರತನಿಗೆ 22 ವರ್ಷ ವಯಸ್ಸಾಗಿತ್ತು. ಶನಿವಾರ ಸಂಜೆ ರೈಲು ಹಳಿಯ ಮೇಲೆ ಭರತನ ಮೃತದೇಹ ದೊರೆತಿದ್ದು, ಘಟನೆಯ ಬಗ್ಗೆ ಹೆಚ್ಚಿನ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.

 

 

 

Also Read  ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆ ಅರ್ಜಿ ಆಹ್ವಾನ

error: Content is protected !!
Scroll to Top