ಮರ್ಧಾಳ: ಬೈಕಿಗೆ ಕಾರು ಢಿಕ್ಕಿ ➤ ಬೈಕ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಆ.14. ಬೈಕಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳದಲ್ಲಿ ಶನಿವಾರದಂದು ನಡೆದಿದೆ.

ಗಾಯಗೊಂಡ ವ್ಯಕ್ತಿಯನ್ನು ಬಂಟ್ರ ಗ್ರಾಮದ ಕಂಪ ತುಂಬಿ ಮನೆ ನಿವಾಸಿ ಮೋನಪ್ಪ ಗೌಡ (60) ಎಂದು ಗುರುತಿಸಲಾಗಿದೆ. ಕಲ್ಲಾಜೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಮರ್ಧಾಳ ಜಂಕ್ಷನ್ ಬಳಿಯ ತಿರುವಿನಲ್ಲಿ ಬೈಕಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ವಿಶ್ವ ಜಲ ದಿನದ ಅಂಗವಾಗಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ವತಿಯಿಂದ ಭಿತ್ತಿ ಪತ್ರ ಪ್ರದರ್ಶನ

 

 

 

 

error: Content is protected !!
Scroll to Top