ರಾಜ್ಯದಲ್ಲಿ ಶಾಲೆ ಆರಂಭಕ್ಕೆ ಮುಹೂರ್ತ ಫಿಕ್ಸ್ ➤ ಸೋಮವಾರದಿಂದಲೇ ಶಾಲೆ ತೆರೆಯಲು ಗ್ರೀನ್ ಸಿಗ್ನಲ್



(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.30. ರಾಜ್ಯದಲ್ಲಿ 6ರ ಮೇಲಿನ ತರಗತಿಯನ್ನು ಆರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.





ಸೆಪ್ಟೆಂಬರ್ 6 ರಿಂದ ಶಾಲೆಗಳು ಆರಂಭವಾಗಲಿದ್ದು, ಸೋಮವಾರದಿಂದ ಶುಕ್ರವಾರದವರೆಗೆ 5 ದಿನಗಳ ಕಾಲ ಶಾಲೆಯನ್ನು ತೆರೆಯಲಾಗುವುದು. ಶೇಕಡ 50 ರಷ್ಟು ಮಕ್ಕಳು ದಿನಬಿಟ್ಟು ದಿನ ಶಾಲೆಗೆ ಹಾಜರಾಗಬೇಕು. ಪಾಸಿಟಿವಿಟಿ ದರ ಶೇಕಡ 2 ಕ್ಕಿಂತ ಕಡಿಮೆ ಇರುವ ತಾಲ್ಲೂಕುಗಳಲ್ಲಿ ಶಾಲೆಗಳನ್ನು ವಾರದಲ್ಲಿ 5 ದಿನ ತೆರೆಯಲು ಸರ್ಕಾರದಿಂದ ಅನುಮತಿ ನೀಡಲಾಗಿದೆ. ಉಳಿದ ಎರಡು ದಿನ ಶಾಲೆಯನ್ನು ಸ್ವಚ್ಛಗೊಳಿಸಲು ಅವಕಾಶ ನೀಡಲಾಗಿದೆ ಎಂದವರು ತಿಳಿಸಿದ್ದಾರೆ.






 

 

 

error: Content is protected !!
Scroll to Top