ಆತೂರು:‌ ಜೀಪ್ – ಬೈಕ್ ನಡುವೆ ಢಿಕ್ಕಿ➤ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಸೆ.06. ಜೀಪ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿ ಜೀಪ್ ಪಲ್ಟಿಯಾದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆತೂರು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ.

ಆತೂರು ನಿವಾಸಿ ಇಸ್ಮಾಯಿಲ್ ಎಂಬವರು ಸಾಮಾನು ಖರೀದಿಸಲೆಂದು ಅಂಗಡಿಗೆ ತೆರಳುತ್ತಿದ್ದ ವೇಳೆ ಉಪ್ಪಿನಂಗಡಿಯಿಂದ ಆತೂರು ಕಡೆಗೆ ಬರುತ್ತಿದ್ದ ಜೀಪ್ ಆಯಿಶಾ ಶಾಲೆಯ ಬಳಿ ಢಿಕ್ಕಿ ಹೊಡೆದು ಪಲ್ಟಿಯಾಗಿದೆ‌. ಘಟನೆಯಲ್ಲಿ ರಸ್ತೆಗೆಸೆಯಲ್ಪಟ್ಟ ಇಸ್ಮಾಯಿಲ್ ಹಾಗೂ ಜೀಪ್ ನಲ್ಲಿದ್ದ ಶಿಹಾಬ್ ಗೋಳಿತ್ತಡಿ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಉಡುಪಿ: ಶ್ರೀಕೃಷ್ಣ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ

 

 

 

error: Content is protected !!
Scroll to Top