ಕಡಬ: ಕಾಲೇಜು ವಿದ್ಯಾರ್ಥಿ ನಾಪತ್ತೆ ➤ ಅಪಹರಣ ಶಂಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ.22. ಇಲ್ಲಿನ ರಾಮಕುಂಜೇಶ್ವರ ವಸತಿ ನಿಲಯದಲ್ಲಿದ್ದ ವಿದ್ಯಾರ್ಥಿಯೋರ್ವ ಕಾಲೇಜಿಗೂ ಹೋಗದೆ, ಮನೆಗೂ ತೆರಳದೆ ನಾಪತ್ತೆಯಾಗಿರುವ ಘಟನೆ ಮಂಗಳವಾರದಂದು ನಡೆದಿದ್ದು, ಈ ಬಗ್ಗೆ ಬಾಲಕ ಅಪಹರಣ ಆಗಿರುವ ಸಾಧ್ಯತೆ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಮಕುಂಜೇಶ್ವರ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಚಿಕ್ಕಮಗಳೂರು ನಿವಾಸಿ ಅಂಜನ್ ಸಿ.ಎಂ. ಎಂಬಾತ ಮಂಗಳವಾರದಂದು ಕಾಲೇಜಿಗೆ ತೆರಳದೆ ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದು, ಈ ಬಗ್ಗೆ ಆತನ ಮನೆಯಲ್ಲಿ ಹಾಗೂ ಸಂಬಂಧಿಕರ ಮನೆಯಲ್ಲಿ ವಿಚಾರಿಸಲಾಗಿ ಪತ್ತೆಯಾಗದ ಹಿನ್ನೆಲೆಯಲ್ಲಿ ಇದೀಗ ಅಂಜನ್ ನನ್ನು ಅಪಹರಿಸಿರಬಹುದು ಎಂಬ ಸಂಶಯ ವ್ಯಕ್ತಪಡಿಸಿ ಹಾಸ್ಟೆಲ್ ಮ್ಯಾನೇಜರ್ ಕಡಬ ಠಾಣೆಗೆ ದೂರು ನೀಡಿದ್ದಾರೆ.

 

Also Read  ಯು.ಟಿ. ಖಾದರ್ ಗೆ ನಕಲಿ ಹೆಸರಲ್ಲಿ ಕರೆ, ಸಂದೇಶ ➤ ಕಮಿಷನರ್ ಗೆ ದೂರು ದಾಖಲು

 

 

error: Content is protected !!
Scroll to Top