ಅಕ್ರಮ ಮರಳು ಅಡ್ಡೆಗೆ ದಾಳಿ- ಆರೋಪಿಗಳು ಪರಾರಿ ➤ ಡ್ರೆಜ್ಜಿಂಗ್ ಮೆಷಿನ್, ಹಿಟಾಚಿ ಹಾಗೂ 4 ಟಿಪ್ಪರ್ ವಶಕ್ಕೆ

(ನ್ಯೂಸ್ ಕಡಬ) Newskadaba.com ಬೆಳ್ತಂಗಡಿ, ಅ. 12.‌ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಧರ್ಮಸ್ಥಳ ಪೊಲೀಸರು 39 ಲಕ್ಷ ರೂ. ಮೌಲ್ಯದ ಸೊತ್ತುಗಳ ವಶಪಡಿಸಿದ ಘಟನೆ ತಾಲೂಕಿನ ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನಡೆದಿದೆ.


ಸಂದೇಶ್ ಹಾಗೂ ಜಗದೀಶ್ ಎಂಬವರು ಅಕ್ರಮವಾಗಿ ಮರಳು ತೆಗೆದು ಸಾಗಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿಯ ಮೇರೆಗೆ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳದಲ್ಲಿದ್ದ ಡ್ರೆಜ್ಜಿಂಗ್ ಮಿಷನ್, ಹಿಟಾಚಿ ಹಾಗೂ ಮರಳು ತುಂಬಿದ್ದ 4 ಟಿಪ್ಪರ್ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ.

 

error: Content is protected !!

Join the Group

Join WhatsApp Group