ಕಡಬ: ಸರಸ್ವತೀ ವಿದ್ಯಾಲಯದಲ್ಲಿ ►ಕನ್ನಡ ರಾಜ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ನ.1. 62ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಡಬದ ಸರಸ್ವತೀ ವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.


ಶ್ರೀಯುತ ಸತೀಶ್ ನಾಯ್ಕ್‌ ಕಡಬ ಇವರು ಧ್ವಜಾರೋಹಣಗೈದು ಕನ್ನಡ ರಾಜ್ಯೋತ್ಸವದ ಮಹತ್ವ ತಿಳಿಸಿದರು. ವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷರಾದ ರವಿರಾಜ್ ಶೆಟ್ಟಿ ಇವರು ಅಧ್ಯಕ್ಷೀಯ ಭಾಷಣ ಮಾಡಿದರು. ವೇದಿಕೆಯಲ್ಲಿ ಪ್ರಾಥಮಿಕ ವಿಭಾಗದ ಮುಖ್ಯ ಶ್ರೀಮಾನ್ ಶ್ರೀ ಮಾಧವ ಕೋಲ್ಪೆ ಹಾಗೂ ಪ್ರೌಢವಿಭಾಗದ ಮುಖ್ಯಮಾತಾಜಿ ಶೈಲಶ್ರೀ ಮಾತಜಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಕೇತರರು ಭಾಗವಹಿಸಿದ್ದರು. ಶೈಲಶ್ರೀ ಮಾತಾಜಿ ವಂದಿಸಿ ಪ್ರೇಮಲತಾ ಮಾತಾಜಿ ನಿರೂಪಿಸಿದರು.

error: Content is protected !!

Join the Group

Join WhatsApp Group