ಮೀನು‌ ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ..!

(ನ್ಯೂಸ್ ಕಡಬ) Newskadaba.com ಕಾರವಾರ, ಅ. 25. ನದಿಗೆ ಗಾಳ ಹಾಕಿ ಮೀನು ಹಿಡಿಯುತ್ತಿದ್ದ ವೇಳೆ ಬಾಲಕನನ್ನು ಮೊಸಳೆ ಎಳೆದೊಯ್ದ ಘಟನೆ ದಾಂಡೇಲಿಯಲ್ಲಿ ನಡೆದಿದೆ.

ಮೊಸಳೆ ಪಾಲಾದ ಬಾಲಕನನ್ನು ಸ್ಥಳೀಯ ನಿವಾಸಿ ಮೋಹಿನ್ ಮೆಹಬೂಬ್ ಗುಲ್ಬರ್ಗವಾಲೆ(16) ಎಂದು ಗುರುತಿಸಲಾಗಿದೆ. ಬಾಲಕ ಮೋಹಿನ್ ಹಳಿಯಾಳ ರಸ್ತೆಯಲ್ಲಿರುವ ಕಾಳಿ ನದಿಯಲ್ಲಿ ಮೀನು ಹಿಡಿಯಲೆಂದು ಗಾಳ ಹಾಕುತ್ತಿದ್ದ ವೇಳೆ ಮೊಸಳೆಯೊಂದು ಹಠಾತ್ತಾಗಿ ದಾಳಿ ನಡೆಸಿ ಬಾಲಕನನ್ನು ಕಚ್ಚಿ ಎಳೆದೊಯ್ದಿದೆ ಎನ್ನಲಾಗಿದೆ.

Also Read  ಸಿದ್ದರಾಮಯ್ಯ ತಿಥಿ ಪತ್ರಿಕೆ ಪೋಸ್ಟ್..!! - ಬಿಜೆಪಿ ಕಾರ್ಯಕರ್ತನ ವಿರುದ್ಧ ಪ್ರಕರಣ

error: Content is protected !!
Scroll to Top