ಕಾಣಿಯೂರು: ಲಾರಿಯಲ್ಲಿ ಸಾಗಿಸುತ್ತಿದ್ದ ಭತ್ತ ಕಟಾವು ಯಂತ್ರ ವಿದ್ಯುತ್ ತಂತಿಗೆ ಸ್ಪರ್ಶ ➤ ತಪ್ಪಿದ ಭಾರೀ ದುರಂತ

(ನ್ಯೂಸ್ ಕಡಬ) Newskadaba.com ಕಾಣಿಯೂರು, ಅ. 26. ಪುತ್ತೂರಿನಿಂದ ಕಾಣಿಯೂರು ಕಡೆಗೆ ತೆರಳುತ್ತಿದ್ದ ಲಾರಿಯೊಂದರಲ್ಲಿ ಭತ್ತ ಕಟಾವು ಯಂತ್ರವನ್ನು ಹೊತ್ತುಕೊಂಡು ಹೋಗುತ್ತಿದ್ದ ಸಂದರ್ಭ ವಿದ್ಯುತ್ ತಂತಿಗೆ ಸ್ಪರ್ಶಿಸಿದ ಘಟನೆ ಬೆಳಂದೂರು ಗ್ರಾಮದ ಕೆಲೆಂಬಿರಿ ಎಂಬಲ್ಲಿ ನಡೆದಿದೆ.


ಪರಿಣಾಮ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ. ಘಟನೆಯಿಂದಾಗಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣಡಗೊಂಡಿತ್ತು. ಘಟನಾ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಹಾಗೂ ಬೆಳಂದೂರು ಗ್ರಾಮ ಪಂಚಾಯತ್ ಅಧ್ಯಕ್ಷರು ಭೇಟಿ ನೀಡಿದ್ದಾರೆ.

Also Read  ಉಚಿತ ಪರೀಕ್ಷಾ ಪೂರ್ವ ತರಬೇತಿ

error: Content is protected !!
Scroll to Top