ಅಕ್ರಮ ಗೋಸಾಗಾಟ ತಡೆದ ಬಜರಂಗದಳ ಕಾರ್ಯಕರ್ತರು ➤ 25 ಗೋವುಗಳ ರಕ್ಷಣೆ

(ನ್ಯೂಸ್ ಕಡಬ) Newskadaba.com ಪಡುಬಿದ್ರಿ, ಅ. 27. ಅಕ್ರಮ ಗೋಸಾಗಾಟವನ್ನು ತಡೆದ ಬಜರಂಗದಳ ಕಾರ್ಯಕರ್ತರು 25ಕ್ಕೂ ಹೆಚ್ಚು ಗೋವುಗಳನ್ನು ರಕ್ಷಿಸಿ ದುಷ್ಕರ್ಮಿಗಳ ಹೆಡೆಮುರಿ ಕಟ್ಟಿದ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ.


ಲಾರಿಯೊಂದರಲ್ಲಿ ಇಪ್ಪತ್ತೈದಕ್ಕೂ ಅಧಿಕ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಭಜರಂಗದಳ ಹಾಗೂ ಪೊಲೀಸ್ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಗೋವುಗಳನ್ನು ರಕ್ಷಿಸಿದ್ದಾರೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Scroll to Top