ತೊಕ್ಕೊಟ್ಟು ಫ್ಲೈಓವರ್ ನಲ್ಲಿ ಬೈಕ್ ಅಪಘಾತ ➤ 20 ಅಡಿ ಆಳದ ರಸ್ತೆಗೆ ಬಿದ್ದು ಸವಾರ ದಾರುಣ ಮೃತ್ಯು

(ನ್ಯೂಸ್ ಕಡಬ) Newskadaba.com ಉಳ್ಳಾಲ, ಅ.27. ಬೈಕ್ ಅಪಘಾತದಲ್ಲಿ ರಸ್ತೆಗೆಸೆಯಲ್ಪಟ್ಟು, ಬೈಕ್ ಸವಾರನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಬುಧವಾರದಂದು ಸಂಜೆ ತೊಕ್ಕೊಟ್ಟು ಫ್ಲೈ ಓವರ್ ನಲ್ಲಿ ನಡೆದಿದೆ.

 

ಮೃತಪಟ್ಟವರನ್ನು ಕುಂಪಲ ಸರಳಾಯ ಕಾಲನಿ ನಿವಾಸಿ ಸುಬ್ರಹ್ಮಣ್ಯ ರಾವ್ ಸಿಂಧ್ಯ(45) ಎಂದು ಗುರುತಿಸಲಾಗಿದೆ. ಇಂದು ಸಂಜೆ ಸುಬ್ರಹ್ಮಣ್ಯ ಅವರು ಮಂಗಳೂರಿನಿಂದ ಕುಂಪಲ ಕಡೆಗೆ ತೊಕ್ಕೊಟ್ಟು ಫ್ಲೈಓವರ್ ನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿ ಮೇಲ್ಸೇತುವೆಯಿಂದ 20 ಅಡಿ ಆಳದ ಸರ್ವಿಸ್ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಪರಿಣಾಮ ತಲೆಗೆ ಗಂಭೀರ ಗಾಯಗಳಾಗಿದ್ದು, ಸುಬ್ರಹ್ಮಣ್ಯ ಅವರನ್ನು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದರು. ಫ್ಲೈ ಓವರಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

error: Content is protected !!
Scroll to Top