ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ ಪುರಸ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 05. ಅಕಾಲಿಕವಾಗಿ ಅಗಲಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ 2021ನೇ ಸಾಲಿನ ಮರಣೋತ್ತರ ಬಸವಶ್ರೀ ಪ್ರಶಸ್ತಿ ಘೋಷಿಸಲಾಗಿದೆ.


ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಡಾ.ಶಿವಮೂರ್ತಿ ಮುರುಘಾ ಶರಣರು ಪುನೀತ್ ರಾಜ್ ಕುಮಾರ್ ಅವರಿಗೆ ‘ಮರಣೋತ್ತರ ಬಸವಶ್ರೀ ಪ್ರಶಸ್ತಿ’ ನೀಡುವುದಾಗಿ ತಿಳಿಸಿದರು. ಈ ಕುರಿತು ಶಿವರಾಜ್ ಕುಮಾರ್ ಅವರ ಜೊತೆ ಚರ್ಚಿಸಲಾಗಿದೆ ಎಂದ ಅವರು, ಮುರುಘಾ ಮಠದಲ್ಲಿ 2022ರಲ್ಲಿ ನಡೆಯುವ ಬಸವ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಪುನೀತ್ ಪತ್ನಿ ಅಶ್ವಿನಿ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದರು.

error: Content is protected !!

Join the Group

Join WhatsApp Group