ಊಟ ಖಾಲಿ ಆಗಿದೆ ಎಂದ ಹೋಟೆಲ್ ಮಾಲೀಕನಿಗೆ ಚಾಕುವಿನಿಂದ ಚೂರಿ ಇರಿತ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 08. ಊಟ ಖಾಲಿ ಆಗಿದೆ ಎಂದು ಹೇಳಿದ್ದಿಕ್ಕೆ ಹೋಟೆಲ್ ಮಾಲೀಕನಿಗೆ ವ್ಯಕ್ರಿಯೋರ್ವ ಚಾಕುವಿನಿಂದ ಇರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.


ಆರೋಪಿಯನ್ನು ರೌಡಿಶೀಟರ್ ಯಲ್ಲಪ್ಪ ಎಂದು ಗುರುತಿಸಲಾಗಿದೆ. ಹೋಟೆಲ್ ಮಾಲೀಕ ಚಂದ್ರಶೇಖರ್‌ ಚಾಕು ಇರಿತಕ್ಕೆ ಒಳಗಾಗಿದ್ದು, ಗಾಯಾಳು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ರೌಡಿಶೀಟರ್ ಯಲ್ಲಪ್ಪ ರಾತ್ರಿ 10 ಗಂಟೆಯ ನಂತರ ಮದ್ಯದ ಬಾಟಲಿ ಹಿಡಿದು ಸಿಗರೇಟು ಸೇದುತ್ತಾ ಹೋಟೆಲ್ ಗೆ ಬಂದಿದ್ದು, ಈ ಸಂದರ್ಭ ಹೋಟೆಲ್ ಮಾಲಕ ಊಟ ಖಾಲಿ ಆಗಿದೆ ಎಂದಿದ್ದಕ್ಕೆ ಚಾಕು ಇರಿದು ಅಟ್ಟಹಾಸ ಮೆರೆದಿದ್ದಾನೆ. ಈತ ಕಳೆದ 2 ತಿಂಗಳ ಹಿಂದೆಯಷ್ಟೇ ಜೈಲಿನಿಂದ ಹೊರ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಕುರಿತು ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಬೆಳ್ತಂಗಡಿ: ವಿಧಾನಸಭೆ ಚುನಾವಣೆಗೆ ಎಸ್‌ಡಿಪಿಐ ಪಕ್ಷ ಯಾರಿಗೆ ಮನೆ ಹಾಕಲಿದೆ.?

error: Content is protected !!
Scroll to Top