ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ “ಪದ್ಮಶ್ರೀ ” ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 08. ಭಾರತ ಸರ್ಕಾರವು ನೀಡುವ ನಾಲ್ಕನೇ ಅತೀ ದೊಡ್ಡ ನಾಗರಿಕ ಪ್ರಶಸ್ತಿ ‘ಪದ್ಮ ಶ್ರೀ’ ಪ್ರಶಸ್ತಿಯನ್ನು ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಸೋಮವಾರದಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರು ಪ್ರದಾನ ಮಾಡಿದರು.

ಇದೇ ಸಂದರ್ಭ ಹಲವು ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ದ.ಕನ್ನಡ್ ಸಾಂಪ್ರದಾಯಿಕ ವಸ್ತ್ರವಾದ ಬಿಳಿ ಪಂಚೆ ಹಾಗೂ ಬಿಳಿ ಅಂಗಿ ಧರಿಸಿದ್ದ ಹಾಜಬ್ಬ ಅವರು ರಾಷ್ಟ್ರಪತಿಯವರಿಂದ ಪ್ರಶಸ್ತಿ ಸ್ವೀಕರಿಸಿದರು. ಕಿತ್ತಳೆ ಹಣ್ಣು ವ್ಯಾಪಾರದಿಂದ ಬಂದ ಹಣವನ್ನು ಕೂಡಿಟ್ಟು ಬಡ ಮಕ್ಕಳಿಗಾಗಿ ಶಾಲೆಯೊಂದನ್ನು ನಿರ್ಮಿಸಿದ ಇವರಿಗೆ ಈಗಾಗಲೇ ಹಲವು ಪ್ರಶಸ್ತಿ ಲಭಿಸಿವೆ. ಪ್ರಶಸ್ತಿ ಪ್ರದಾನ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಗೃಹಸಚಿವ ಅಮಿತ್ ಶಾ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!
Scroll to Top