ಕಡಬ: ಯುವಜನ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

(ನ್ಯೂಸ್ ಕಡಬ) newskadaba.com ಕಡಬ, ನ. 08. ತಾಲೂಕಿನ ಯುವಜನ ಒಕ್ಕೂಟದ ಪ್ರಪ್ರಥಮ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಭಾನುವಾರದಂದು ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಡಾ. ಎಸ್ ಬಾಲಾಜಿ ವಹಿಸಿದ್ದರು. ಪದಗ್ರಹಣ ಸಮಾರಂಭದ ಉದ್ಘಾಟನೆಯನ್ನು ರಾಜ್ಯ ಸಚಿವರಾದ ಎಸ್. ಅಂಗಾರ ಅವರು ನೆರವೇರಿಸಿದರು. ಪ್ರತಿಜ್ಞಾವಿಧಿ ಭೋದನೆಯನ್ನು ದ.ಕ ಜಿಲ್ಲಾ ಯುವಜನ ಒಕ್ಕೂಟ ಅಧ್ಯಕ್ಷರಾಗಿರುವ ಸುರೇಶ್ ರೈ ಸೂಡಿಮುಳ್ಳು ಭೋದಿಸಿದರು. ಈ ಸಂದರ್ಭದಲ್ಲಿ ಅತಿಥಿಗಳಾಗಿ ರಘುವೀರ್ ಸೂಟರ್ ಪೇಟೆ, ಕೃಷ್ಣ ಶೆಟ್ಟಿ ಕಡಬ, ರಾಕೇಶ್ ರೈ ಕೆಡೆಂಜಿ, ಸೀತಾರಾಮ ಗೌಡ ಪೊಸವಳಿಕೆ, ಪಿ.ಪಿ ವರ್ಗೀಸ್, ನಾಗರಾಜ್ ಎನ್. ಕೆ, ಮೇದಪ್ಪ ಗೌಡ ಮೊದಲಾದವರು ಉಪಸ್ಥಿತರಿದ್ದರು.

error: Content is protected !!

Join the Group

Join WhatsApp Group