ಪುತ್ತೂರು: ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಢಿಕ್ಕಿ ➤ ಓರ್ವನಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 13. ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿಯಲ್ಲಿದ್ದ ನಿರ್ವಾಹಕನ ಕಾಲು ಮುರಿತಕ್ಕೊಳಗಾದ ಘಟನೆ ಪುತ್ತೂರಿನ ಕೆಮ್ಮಾಯಿ ಜಂಕ್ಷನ್ ನಲ್ಲಿ ಶನಿವಾರದಂದು ನಡೆದಿದೆ.


ರಸ್ತೆ ಕಾಮಗಾರಿಯ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದ್ದು, ಪರಿಣಾಮ ಲಾರಿಯಲ್ಲಿದ್ದ ನಿರ್ವಾಹಕನ ಕಾಲು ಮುರಿತಗೊಂಡು, ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

Also Read  ಮತದಾರರನ್ನು ಧರ್ಮಸ್ಥಳ ಪ್ರವಾಸಕ್ಕೆ ಕರೆದೊಯ್ದಿದ್ದ 4 ಬಸ್‌ ಸೀಝ್‌

error: Content is protected !!
Scroll to Top