ಬಿಸಿಲೆ: ಮರಕ್ಕೆ ಢಿಕ್ಕಿ ಹೊಡೆದ ಕಾರು ➤ ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ.13. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಗಂಭೀರ ಗಾಯಗೊಂಡ ಘಟನೆ ಶನಿವಾರ ಸಂಜೆ ಬಿಸ್ಲೆ ಘಾಟ್ ನಲ್ಲಿ ನಡೆದಿದೆ.

ಗಂಭೀರ ಗಾಯಗೊಂಡಿರುವ ಗಾಯಾಳುವನ್ನು ಮಂಗಳೂರು ನಿವಾಸಿ ರವಿ ಎಂದು ಗುರುತಿಸಲಾಗಿದೆ. ಬಿಸಿಲೆ ಘಾಟ್ ನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಚಾಲಕ ರವಿಯವರ ಕಾಲು ಮುರಿತಕ್ಕೆ ಒಳಗಾಗಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Also Read  ಕಡಬದ ನೂತನ ತಹಶೀಲ್ದಾರ್ ಆಗಿ ಬಿ. ಅನಂತ ಶಂಕರ್ ನೇಮಕ

 

 

 

error: Content is protected !!
Scroll to Top