ಎಸ್ಡಿಪಿಐ ಅಭ್ಯರ್ಥಿ ಶಾಫಿ ಬೆಳ್ಳಾರೆ ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ವಿಧಾನಪರಿಷತ್ ಚುನಾವಣೆಗೆ ಎಸ್ಡಿಪಿಐ ಅಭ್ಯರ್ಥಿ ಶಾಫಿ ಬೆಳ್ಳಾರೆ ಅವರು ಚುನಾವಣಾ ಅಧಿಕಾರಿಯಾಗಿರುವ ದ.ಕ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರ ಕಛೇರಿಯಲ್ಲಿ ಇಂದು ನಾಮಪತ್ರ ಸಲ್ಲಿಸಿದರು.

ಬಳಿಕ ಮಾಧ್ಯಮದೊಡನೆ ಮಾತನಾಡಿದ ಅವರು, ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅವಿರೋಧ ಆಯ್ಕೆಗೆ ಪ್ರಯತ್ನ ನಡೆಸಿದ್ದು, ಆದರೆ ಅದಕ್ಕೆ ಎಸ್ಡಿಪಿಐ ಅವಕಾಶ ಮಾಡಿಕೊಡುವುದಿಲ್ಲ, ಬದಲಾಗಿ ಚುನಾವಣೆಯನ್ನು ಎದುರಿಸುತ್ತೇವೆ ಎಂದರು.

 

error: Content is protected !!
Scroll to Top