ಕಡಬ: ಪತ್ರಕರ್ತರ ಮೇಲಿನ ಹಲ್ಲೆ ಖಂಡಿಸಿ ಸೂಕ್ತ ಕ್ರಮಕ್ಕೆ ಆಗ್ರಹ ➤ ತಾಲೂಕು ಪತ್ರಕರ್ತರ ಸಂಘದಿಂದ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ನ. 23. ದ.ಕ ಜಿಲ್ಲೆಯ ಖಾಸಗಿ ಟಿವಿ ವರದಿಗಾರನ ಮೇಲಿನ ಹಲ್ಲೆ ಖಂಡಿಸಿ, ಪತ್ರಕರ್ತರ ಮೇಲಿನ ಹಲ್ಲೆ ವಿಚಾರದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕಡಬ ತಾಲೂಕು ಪತ್ರಕರ್ತರ ಸಂಘವು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದೆ.

ವರದಿಗಾರರ ಮೇಲಿನ ಹಲ್ಲೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದು, ಇನ್ನು ಮುಂದೆ ಇಂತಹ ಪ್ರಕರಣಗಳು ಮರುಕಳಿಸದಂತೆ ಸರಕಾರವು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಈ ಸಂದರ್ಭ ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ, ಕಾರ್ಯದರ್ಶಿ ವಿಜಯ ಕುಮಾರ್ ಹಾಗೂ ಮಾಜಿ ಅಧ್ಯಕ್ಷ ಬಾಲಕೃಷ್ಣ ಕೊಯಿಲ ಮೊದಲಾದವರು ಉಪಸ್ಥಿತರಿದ್ದರು.

error: Content is protected !!
Scroll to Top