ಕೊಂಬೆಟ್ಟು ಕಾಲೇಜಿನಲ್ಲಿ ಮತ್ತೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ➤ ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 24. ಮಂಗಳವಾರದಂದು ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳ ಮೇಲಿನ ಹಲ್ಲೆ ನಡೆದ ಬೆನ್ನಲ್ಲೇ ಇಂದು ಅದೇ ಕಾಲೇಜಿನ ವಿದ್ಯಾರ್ಥಿಗಳು ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.


ಗಾಯಗೊಂಡವರನ್ನು ಕೊಂಬೆಟ್ಟು ಶಾಲಾ ವಿದ್ಯಾರ್ಥಿಗಳಾದ ಸೈಫುದ್ದೀನ್ ಹಾಗೂ ಇಮ್ರಾನ್ ಎಂದು ಗುರುತಿಸಲಾಗಿದೆ. ಇನ್ನಿಬ್ಬರು ವಿದ್ಯಾರ್ಥಿಗಳಿಗೂ ಗಾಯಗೊಂಡ ಬಗ್ಗೆ ವರದಿಯಾಗಿದೆ. ನಿನ್ನೆಯ ಪ್ರಕರಣಕ್ಕೆ ಸಂಬಂಧಿಸಿ ಇಂದು ಎಬಿವಿಪಿ ವಿದ್ಯಾರ್ಥಿಗಳಿಂದ ಪುತ್ತೂರು ಠಾಣೆಯ ಬಳಿ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆಯ ನಂತರ 30 ಜನರ ಗುಂಪೊಂದು ಮೂವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕೆತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Also Read  ದ.ಕ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹೇಮಾವತಿ ವಿ ಹೆಗ್ಗಡೆ ಆಯ್ಕೆ

error: Content is protected !!
Scroll to Top