ಉಳಾಯಿಬೆಟ್ಟು: ಎಂಟರ ಬಾಲೆಯ ಅತ್ಯಾಚಾರವೆಸಗಿ ಕೊಲೆ ಪ್ರಕರಣ..! ➤ ನಾಲ್ವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 24. ಕರಾವಳಿಯನ್ನೇ ಬೆಚ್ಚಿಬೀಳಿಸಿದ ಉಳಾಯಿಬೆಟ್ಟು ಪೆರಾರಿ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ ಎಂಟರ ಹರೆಯದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಉತ್ತರ ಭಾರತ ಮೂಲದ ನಾಲ್ವರು ಆರೋಪಿಗಳನ್ನು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.

ಬಂಧಿತ ಆರೋಪಿಗಳನ್ನು ಜಾಯ್ ಸಿಂಗ್ ಯಾನೆ ಜಾಯಿಬಾನ್, ಮುಖೇಶ್ ಸಿಂಗ್, ಮನೀಶ್ ತಿಕ್ರಿ ಹಾಗೂ ಮುನೀಮ್ ಸಿಂಗ್ ಎಂದು ಗುರುತಿಸಲಾಗಿದೆ. ಜಾರ್ಖಂಡ್ ಮೂಲದ ಕೂಲಿ ಕಾರ್ಮಿಕ ದಂಪತಿಯ ಎಂಟರ ಹರೆಯ ಬಾಲಕಿಯು ಆಟವಾಡುತ್ತಿದ್ದ ವೇಳೆ ನ. 21ರ ಭಾನುವಾರದಂದು ಪುಸಲಾಯಿಸಿದ ಆರೋಪಿಗಳು, ರಾಜ್ ಟೈಲ್ಸ್ ಫ್ಯಾಕ್ಟರಿಯ ಬಳಿಯಲ್ಲಿರುವ ತಮ್ಮ ವಾಸಸ್ಥಳಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿ ಬಳಿಕ ಕತ್ತು ಹಿಸುಕಿ ಕೊಲೆ ನಡೆಸಿರುವುದಾಗಿ ವಿಚಾರಣೆಯ ವೇಳೆ ಆರೋಪಿಗಳು ಬಾಯಿ ಬಿಟ್ಟಿದ್ದಾರೆ ತಿಳಿದು ಬಂದಿದೆ.

Also Read  ಕಡಬ: ಸೈಂಟ್ ಜೋಕಿಮ್ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಆಚರಣೆ

error: Content is protected !!
Scroll to Top