ಹೊಸ ರೂಪಾಂತರಿ ವೈರಸ್ ಭೀತಿ ➤ ವಿಮಾನ ಸಂಚಾರ ಸ್ಥಗಿತಗೊಳಿಸಲು ಪ್ರಧಾನಿಗೆ ಅರವಿಂದ್ ಕೇಜ್ರಿವಾಲ್ ಮನವಿ



(ನ್ಯೂಸ್ ಕಡಬ) newskadaba.com ನವದೆಹಲಿ, ನ. 27. ಹೊಸ ರೂಪಾಂತರಿ ವೈರಸ್ ನಿಂದ ಪ್ರಭಾವಿತವಾಗಿರುವ ದೇಶಗಳಿಂದ ವಿಮಾನ ಸಂಚಾರವನ್ನು ಸ್ಥಗಿತಗೊಳಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿಯವರಿಗೆ ಮನವಿ ಮಾಡಿದ್ದಾರೆ.







 

ಪ್ರಧಾನ ಮಂತ್ರಿಯವರನ್ನು ಒತ್ತಾಯಿಸಿದ ಕೇಜ್ರಿವಾಲ್ ಅವರು ಟ್ವೀಟ್ ಮೂಲಕ, ಬಹಳ ಕಷ್ಟಪಟ್ಟು ನಮ್ಮ ದೇಶ ಕೊರೋನಾ ವೈರಸ್ ನಿಂದ ಚೇತರಿಸಿಕೊಂಡಿದೆ. ಈ ಹೊಸ ರೂಪಾಂತರಿ ವೈರಸ್ ಭಾರತ ಪ್ರವೇಶಿಸುವುದನ್ನು ತಡೆಯಲು ನಾವು ಸಾಧ್ಯವಿರುವ ಎಲ್ಲವನ್ನೂ ಮಾಡಬೇಕಾಗಿದೆ ಎಂದು ಬರೆದಿದ್ದಾರೆ.






error: Content is protected !!
Scroll to Top