ಗೋಸಾಗಾಟವನ್ನು ತಡೆಯಲೆತ್ನಿಸಿದ ಯುವಕರ ಮೇಲೆ ವಾಹನ ಹತ್ತಿಸಿದ ಗೋಕಳ್ಳರು ➤ ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಡಿ. 01. ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ವೇಳೆ ಗೋಕಳ್ಳರನ್ನು ತಡೆಯಲೆತ್ನಿಸಿದ ಇಬ್ಬರ ಮೇಲೆಯೇ ಪಿಕಪ್ ವಾಹನ ಹತ್ತಿಸಿದ ಪರಿಣಾಮ ಯುವಕರಿಬ್ಬರು ಗಂಭೀರ ಗಾಯಗೊಂಡ ಘಟನೆ ತೀರ್ಥಹಳ್ಳಿ ತಾಲೂಕಿನ ಮೇಳಿಗೆ ಎಂಬಲ್ಲಿ ನಡೆದಿದೆ.

ಗಾಯಗೊಂಡವರನ್ನು ಕಿರಣ್ (23) ಹಾಗೂ ಚರಣ್ (24) ಎಂದು ಗುರುತಿಸಲಾಗಿದೆ. ಇವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇಳಿಗೆಯಿಂದ ಗೋಕಳ್ಳರನ್ನು ಹಿಂಬಾಲಿಸಿದ್ದ ಯುವಕರಿಬ್ಬರ ಮೇಲೆಯೇ ಪಿಕ್ ಅಪ್ ವಾಹನ ಹತ್ತಿಸಲಾಗಿದೆ ಎನ್ನಲಾಗಿದೆ. ಘಟನೆಯ ಬಳಿಕ ಆಸ್ಪತ್ರೆಯ ಮುಂದೆ ನೂರಾರು ಜನ ಸೇರಿದ್ದು ಆತಂಕದ ವಾತಾವರಣ ಸೃಷ್ಟಿಯಾಗಿದೆ. ಅಕ್ರಮ ಗೋಸಾಗಾಟಗಾರರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

Also Read  ನಿರ್ಮಾಣ ಹಂತದ ಕಟ್ಟಡದ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!!

error: Content is protected !!
Scroll to Top