ಧರ್ಮಸ್ಥಳ: ಇಂದು ಸರ್ವಧರ್ಮ ಸಮ್ಮೇಳನ 89ನೇ ಅಧಿವೇಶನಕ್ಕೆ ರಾಜ್ಯಪಾಲರಿಂದ ಚಾಲನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 02. ಸರ್ವಧರ್ಮ ಸಮ್ಮೇಳನದ 89ನೇ ಅಧಿವೇಶನಕ್ಕೆ ಇಂದು ಧರ್ಮಸ್ಥಳ ಕ್ಷೇತ್ರದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಲ್ನೋಟ್ ಅವರು ಚಾಲನೆ ನೀಡಲಿದ್ದಾರೆ.


ಇಂದು ಸಂಜೆ 5 ಗಂಟೆಗೆ ಅಮೃತವರ್ಷಿಣಿ ಸಭಾ ಭವನದಲ್ಲಿ ಅಧಿವೇಶನವನ್ನು ರಾಜ್ಯಪಾಲ ಥಾವರ್ ಚಂದ್ ಗೆಲ್ನೋಟ್ ಅವರು ಉದ್ಘಾಟಿಸಲಿರುವರು. ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಸ್ವಾಗತಿಸಿ, ಬೆಂಗಳೂರಿನ ಎಸ್. ವ್ಯಾಸ ಯೋಗ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ರಾಮಚಂದ್ರ ಭಟ್ ಅವರು ಅಧ್ಯಕ್ಷತೆ ವಹಿಸುವರು. ಸಾಗರದ ಖ್ಯಾತ ಸಾಹಿತಿ ಸಫ್ರಾಜ್‌ ಚಂದ್ರಗುತ್ತಿ, ಮೈಸೂರು ವಿವಿಯ ನಿವೃತ್ತ ಪ್ರಾಧ್ಯಾಪಕರಾದ ಡಾ. ಎಂ.ಎಸ್. ಪದ್ಮ ಹಾಗೂ ಶಿವಮೊಗ್ಗ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವೀರೇಶ್ ವಿ. ಮೊರಾಸ್ ಧಾರ್ಮಿಕ ಉಪನ್ಯಾಸ ನೀಡಲಿರುವರು.

 

Also Read  ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಬಸ್ ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ➤ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಬಸ್ ಚಾಲಕ, ನಿರ್ವಾಹಕ

error: Content is protected !!
Scroll to Top