ಸವಣೂರು: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪಕ್ಕದ ಮನೆಯ ಟ್ಯಾಂಕ್ ನಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 02. ಪಕ್ಕದ ಮನೆಯ ನೀರಿನ ಟ್ಯಾಂಕ್ ಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸವಣೂರಿನಲ್ಲಿ ನಡೆದಿದೆ.

 

ಮೃತಪಟ್ಟವರನ್ನು ಸವಣೂರು ಗ್ರಾಮದ ಮಾಂತೂರು ಒಡ್ಸಾಗ್ ನಿವಾಸಿ ರಾಮಯ್ಯ ಪೂಜಾರಿ (48) ಎಂದು ಗುರುತಿಸಲಾಗಿದೆ. ಇವರು ಕಳೆದೆರಡು ದಿನಗಳ ಹಿಂದೆ ಸವಣೂರು ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮತ್ತೆ ಹಿಂತಿರುಗಿ ಬಾರದೇ ಇದ್ದು, ಮನೆಯವರು ಎಲ್ಲೆಡೆ ಹುಡುಕಾಟ ನಡೆಸುತ್ತಿದ್ದಾಗ ಬುಧವಾರದಂದು ಪಕ್ಕದ ಮನೆಯ ನೀರಿನ ಟ್ಯಾಂಕ್ ನಲ್ಲಿ ಮೃತದೇಹ ಪತ್ತೆಯಾಗಿದೆ. ಇದು ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

Also Read  ಕರಾವಳಿಯಲ್ಲಿ ಭಾರೀ ಗಾಳಿ - ಮಳೆಯಾಗುತ್ತಿರುವ ಹಿನ್ನೆಲೆ | ತುರ್ತು ಕ್ರಮಗಳಿಗಾಗಿ ಈ ಕ್ರಮಗಳನ್ನು ಅನುಸರಿಸಿ

 

 

error: Content is protected !!
Scroll to Top