ರಸ್ತೆ ಬದಿಯಲ್ಲಿದ್ದ ಲೈಟ್ ಕಂಬಕ್ಕೆ ಬೈಕ್ ಢಿಕ್ಕಿ ➤ ಸವಾರ ದುರ್ಮರಣ

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 08. ಸವಾರನ ನಿಯಂತ್ರ ತಪ್ಪಿದ ಬೈಕೊಂದು ರಸ್ತೆ ಬದಿಯ ಲೈಟ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರದಂದು ಬೆಳಗ್ಗೆ ಉಳ್ಳಾಲ ಮಾಸ್ತಿಕಟ್ಟೆ ಬಳಿ ನಡೆದಿದೆ.

ಮೃತ ಯವವಕನನ್ನು ಮದನಿ ನಗರ ನಿವಾಸಿ ಮಹಮ್ಮದ್ ಕೈಫ್ (22)ಎಂದು ಗುರುತಿಸಲಾಗಿದೆ. ಆಟೋ ರಿಕ್ಷಾವೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್ ಸವಾರನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ ಎನ್ನಲಾಗಿದೆ.

 

Also Read  ಬೆಳ್ತಂಗಡಿ: 'ತಾಂಟ್ ರೆ ಬಾ ತಾಂಟ್' ಎಂದು ಹೇಳಿ 25 ಮಂದಿಯಿಂದ ಇಬ್ಬರಿಗೆ ಹಲ್ಲೆ

 

error: Content is protected !!
Scroll to Top