ಆಸ್ತಿಗಾಗಿ ಮಗನನ್ನೇ ಬಲಿಪಡೆದ ತಂದೆ..!

(ನ್ಯೂಸ್ ಕಡಬ) newskadaba.com ಸರಗೂರು, ಡಿ. 11. ಆಸ್ತಿ ವಿಚಾರದ ವೈಷಮ್ಯಕ್ಕೆ ತಂದೆಯೇ ಮಗನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಹಾದನೂರು ಗ್ರಾಮದಲ್ಲಿ ನಡೆದಿದೆ.

 

ಹತ್ಯೆಗೀಡಾಗಿರುವ ಯುವಕನನ್ನು ಸರಗೂರು ತಾಲ್ಲೂಕಿನ ಹಾಸನೂರು ಗ್ರಾಮದ ಸ್ವಾಮಿ(30) ಎಂದು ಗುರುತಿಸಲಾಗಿದೆ. ತಂದೆ ಸಿದ್ದರಾಜು ತನ್ನ ಸ್ವಂತ ಮಗನನ್ನೇ ಕೊಂದ ಆರೋಪಿಯಾಗಿದ್ದಾನೆ. ರಾತ್ರಿ ವೇಳೆ ಮನೆಯಲ್ಲಿ ಸ್ವಾಮಿ ನಿದ್ರಿಸುತ್ತಿದ್ದ ವೇಳೆ ತಂದೆ ಸಿದ್ದರಾಜು ಕಂಠಪೂರ್ತಿ ಕುಡಿದು ಬಂದು ಮರದ ತುಂಡಿನಿಂದ ತನ್ನ ಮಗನ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ನಡೆಸಿದ್ದಾನೆ ಎಂದು ವಿಚಾರಣೆ ವೇಳೆ ತಿಳಿಸಿದ್ದಾನೆ ಎನ್ನಲಾಗಿದೆ. ಘಟನೆಯ ಬಳಿಕ, ಜಮೀನು ಮತ್ತು ಆಸ್ತಿಯ ವಿಚಾರವಾಗಿ ತಾನೇ ಮಗನನ್ನು ಕೊಂದಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಬಟ್ಟೆ ತೊಳೆಯಲೆಂದು ಹೋಗಿದ್ದ ವೇಳೆ ನೀರಿನಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಮೃತ್ಯು

 

error: Content is protected !!
Scroll to Top