ಸಾರ್ವಜನಿಕ ಸ್ಥಳಗಳಲ್ಲಿರುವ ಪ್ರತಿಮೆಗಳ ತೆರವಿಗೆ ಹೈಕೋರ್ಟ್ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 15. ಸಾರ್ವಜನಿಕ ಸ್ಥಳಗಳಲ್ಲಿರುವ ಪ್ರತಿಮೆಗಳನ್ನು ಯಾವುದೇ ರಿಯಾಯಿತಿ ಇಲ್ಲದೇ ತೆರವುಗೊಳಿಸಿ ಎಂದು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಸಾರ್ವಜನಿಕ ಸ್ಥಳದಲ್ಲಿ ಪ್ರತಿಮೆ ಪ್ರತಿಷ್ಠಾನಗೊಳಿಸಲು ನಿರ್ಬಂಧವಿದ್ದು, ಅದು ದೇವರ ಮೂರ್ತಿಯಾಗಲೀ ಅಥವಾ ಮಹಾನ್ ವ್ಯಕ್ತಿಗಳ ಪ್ರತಿಮೆಯೇ ಆಗಲಿ ಅದು ಸಾರ್ವಜನಿಕ ಸ್ಥಳದಲ್ಲಿ ಪ್ರತಿಷ್ಠಾಪನೆ ಮಾಡುವಂತಿಲ್ಲ. ಬೇಕಾದರೆ ಸ್ವಂತ ಜಾಗದಲ್ಲಿ ಪ್ರತಿಮೆ ನಿರ್ಮಿಸಲಿ, ಅದಕ್ಕೆ ನ್ಯಾಯಾಲಯದ ಅಡ್ಡಿಯಿಲ್ಲ ಎಂದು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಖಡಕ್ ಆಗಿ ವಾರ್ನಿಂಗ್ ನೀಡಿದೆ.

Also Read  ಕರಾವಳಿಯಲ್ಲೊಂದು ಹೃದಯವಿದ್ರಾವಕ ಘಟನೆ ➤ ಮಗನಿಗೆ ಕೊರೊನಾ ಸೊಂಕು ಮನನೊಂದು ತಂದೆ ಆತ್ಮಹತ್ಯೆ.!

error: Content is protected !!
Scroll to Top