ಬೆಳ್ತಂಗಡಿ: ಆಟೋದಲ್ಲಿ ಅಕ್ರಮ ಸಾಗಾಟ ➤ ಆರೋಪಿಗಳು ಪರಾರಿ, ಗೋವು ಸಹಿತ ವಾಹನ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 16. ಅಕ್ರಮ ಗೋಸಾಗಾಟ ಮಾಡುತ್ತಿದ್ದುದನ್ನು ಭಜರಂಗದಳ ಕಾರ್ಯಕರ್ತರು ತಡೆದಿದ್ದು, ಈ ವೇಳೆ ಇಬ್ಬರು ಆರೋಪಿಗಳು ಪರಾರಿಯಾದ ಘಟನೆ ತಾಲೂಕಿನ ಕಾಯರ್ತಡ್ಕ ಸಮೀಪದ ಬೀಜದಡಿ ಎಂಬಲ್ಲಿ ನಡೆದಿದೆ.


ಬೀಜದಡಿ ಎಂಬಲ್ಲಿ ಅಕ್ರಮ ಗೋಸಾಗಾಟ ನಡೆಯುತ್ತಿದೆ ಎಂಬ ಮಾಹಿತಿ ಪ್ರಕಾರ ದಾಳಿ ನಡೆಸಿದ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು ತಡೆದಿದ್ದು, ಈ ವೇಳೆ ಆರೋಪಿಗಳಾದ ರವೀಂದ್ರ ಪುತ್ಯೆ ಹಾಗೂ ಶ್ರೀಧರ ಪಂಚಮಿಪಾದೆ ಎಂಬವರು ಪರಾರಿಯಾಗಿದ್ದಾರೆ. ವಾಹನ ಹಾಗೂ ಗೋವನ್ನು ಕಾರ್ಯಕರ್ತರು ಧರ್ಮಸ್ಥಳ ಪೊಲೀಸರ ವಶಕ್ಕೆ ನೀಡಿದ್ದು, ಪೊಲೀಸರು ಆರೋಪಿಗಳ ಬಂದನಕ್ಕೆ ಬಲೆ ಬೀಸಿದ್ದಾರೆ ಎನ್ನಲಾಗಿದೆ.

Also Read  ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ ➤ ಹವಾಮಾನ ಇಲಾಖೆಯಿಂದ `ಯೆಲ್ಲೊ' ಅಲರ್ಟ್ ಘೋಷಣೆ

error: Content is protected !!
Scroll to Top