ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ➤ ನಾಲ್ವರ ವಿರುದ್ದ ಕೇಸು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 16. ನಗರದ ಹೊರವಲಯದಲ್ಲಿ ಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿ ನಾಲ್ಕು ಮಂದಿಯ ವಿರುದ್ದ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರದ ಕಾಲೇಜೊಂದರ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಗೆ ವಾಮಂಜೂರು ನಿವಾಸಿ ಚರಣ್ ಹಾಗೂ ಆತನ ಮೂವರು ಸ್ನೇಹಿತರು ನಿರಂತರ ಕಿರುಕುಳ ನೀಡಿದ್ದರು. ಹಾಗೆಯೇ ವಿದ್ಯಾರ್ಥಿನಿಯ ಮೊಬೈಲ್ ಕಿತ್ತುಕೊಂಡು, ಅದರಲ್ಲಿರೋ ಮೆಮೊರಿ ಕಾರ್ಡ್ ತೆಗೆದಿದ್ದಲ್ಲದೇ ಆಗಾಗ ಮಸೇಜ್ ಹಾಗೂ ಕರೆಮಾಡಿ ಕಿರುಕುಳ ನೀಡುತ್ತಿದ್ದರು ಎಂದು ವಿದ್ಯಾರ್ಥಿನಿ ದೂರಿನಲ್ಲಿ ತಿಳಿಸಿದ್ದು, ಅಲ್ಲದೇ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದರು ಹಾಕಿರುವುದಾಗಿ ವಿದ್ಯಾರ್ಥಿನಿ ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಮಂಗಳೂರು: ಪ್ರೆಸ್ ಕ್ಲಬ್ ದಿನಾಚರಣೆ ➤ ಕಡಬ ತಾಲೂಕು ಪತ್ರಕರ್ತರ ಸಂಘಕ್ಕೆ ECG ಯಂತ್ರ ಹಸ್ತಾಂತರ

error: Content is protected !!
Scroll to Top