ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ- ಆರೋಪಿಗಳು ಎಸ್ಕೇಪ್ ➤ ಗೋಮಾಂಸ ಹಾಗೂ ಬೈಕ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 19. ಬಜರಂಗದಳದ ಖಚಿತ ಮಾಹಿತಿ ಮೇರೆಗೆ ಅಕ್ರಮವಾಗಿ ನಡೆಯುತ್ತಿದ್ದ ಕಸಾಯಿಖಾನೆಗೆ ಪೊಲೀಸರು ದಾಳಿ ನಡೆಸಿದ್ದು, ಈ ಸಂದರ್ಭ ಆರೋಪಿಗಳು ಪರಾರಿಯಾದ ಘಟನೆ ತಾಲೂಕಿನ ನಡ ಗ್ರಾಮದ ಪಾರ್ನಡ್ಕ ಎಂಬಲ್ಲಿ ನಡೆದಿದೆ.

ಪರಾರಿಯಾದ ಆರೋಪಿಗಳನ್ನು ಇಸಾಕ್, ತಾಜುದ್ದೀನ್ ಹಾಗೂ ರಝಾಕ್ ಎಂದು ಗುರುತಿಸಲಾಗಿದೆ. ಬಜರಂಗದಳ ಕಾರ್ಯಕರ್ತರ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಸ್ಥಳದಲ್ಲಿದ್ದ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಅಲ್ಲದೇ ಘಟನಾ ಸ್ಥಳದಲ್ಲಿ ಗೋಮಾಂಸ ಹಾಗೂ ಬೈಕ್ ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.

Also Read  ಕಡಬ ಗ್ರಾ.ಪಂ.ಸದಸ್ಯ ಕೃಷ್ಣಪ್ಪ ಪೂಜಾರಿಯವರ ಸಹೋದರ ಹೃದಯಾಘಾತದಿಂದ ನಿಧನ

error: Content is protected !!
Scroll to Top