ರಸ್ತೆಯಲ್ಲಿ ನಡೆಯುತ್ತಿದ್ದವರ ಮೇಲೆ ಹೆಜ್ಜೇನು ದಾಳಿ..! ➤ 8 ಮಂದಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಕಿನ್ನಿಗೋಳಿ, ಡಿ. 20. ರಸ್ತೆಯಲ್ಲಿ ಸಂಚರಿಸುತ್ತಿದ್ದವರ ಮೇಲೆ ಇಲ್ಲಿನ ಮುಖ್ಯರಸ್ತೆಯ ಕಾವೇರಿ ರಾಜ್ ಹೆರಿಟೇಜ್ ಕಟ್ಟಡದಲ್ಲಿ ಗೂಡು ಕಟ್ಟಿದ್ದ ಹೆಜ್ಜೇನುಗಳು ದಾಳಿ ನಡೆಸಿದ ಪರಿಣಾಮ ಎಂಟು ಮಂದಿ ಗಾಯಗೊಂಡ ಘಟನೆ ಸೋಮವಾರದಂದು ಬೆಳಗ್ಗೆ ನಡೆದಿದೆ.


ಹಕ್ಕಿಯೊಂದು ಹೆಜ್ಜೇನು ಗೂಡಿಗೆ ಕುಕ್ಕಿದ ಪರಿಣಾಮ ಹೆಜ್ಜೇನುಗಳು ರಸ್ತೆಯಲ್ಲಿ ತೆರಳುತ್ತಿದ್ದವರ ಮೇಲೆ ಏಕಾಏಕಿ ದಾಳಿ ನಡೆಸಿದೆ ಎನ್ನಲಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದು, ಸಂಜೆಯೊಳಗೆ ಹೆಜ್ಜೇನು ತೆರವು ಕಾರ್ಯ ನಡೆಯಲಿದೆ ಎಂದು ತಿಳಿದುಬಂದಿದೆ.

Also Read  ಗುಡಿಸಲಲ್ಲಿ ವಾಸವಿದ್ದ ಕುಟುಂಬಕ್ಕೆ ಸುಸಜ್ಜಿತ ಮನೆ ಹಸ್ತಾಂತರ ➤ ವೀರಕೇಸರಿ ಮತ್ತು ಸ್ಪಂದನ ಸೇವಾ ಸಂಘದಿಂದ ಮನೆ ನಿರ್ಮಾಣ

 

 

error: Content is protected !!
Scroll to Top