ಇಂದಿನಿಂದ ರಾಜ್ಯದಾದ್ಯಂತ ನೈಟ್ ಕರ್ಫ್ಯೂ ಜಾರಿ ➤ ರಾತ್ರಿ 10ರಿಂದ ಬೆಳಗ್ಗೆ 5ರ ವರೆಗೆ ಎಲ್ಲಾ ಚಟುವಟಿಕೆ ಬಂದ್- ನಿಯಮ ಉಲ್ಲಂಘಿಸಿದಲ್ಲಿ ಕಠಿಣ ಕ್ರಮ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 28. ರೂಪಾಂತರಿ ತಳಿ ಓಮಿಕ್ರಾನ್ ಆತಂಕದ ಹಿನ್ನೆಲೆ ರಾಜ್ಯ ಸರ್ಕಾರ ವಿಧಿಸಿರುವ ನೈಟ್ ಕರ್ಫ್ಯೂ ಇಂದಿನಿಂದ ಜಾರಿಯಾಗಲಿದ್ದು, ಮುಂದಿನ 10 ದಿನಗಳ ಕಾಲ ಪ್ರತೀ ದಿನ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ವಾಣಿಜ್ಯ ಚಟುವಟಿಕೆ ಹಾಗೂ ಅನಗತ್ಯ ಸಂಚಾರಕ್ಕೆ ನಿರ್ಬಂಧ ಇರಲಿದೆ.

ಅಲ್ಲದೇ ಇದರ ಜೊತೆಗೆ ಸಭೆ-ಸಮಾರಂಭ, ಸಮಾವೇಶ ಹಾಗೂ ಮದುವೆ ಕಾರ್ಯಕ್ರಮಗಳಲ್ಲಿ 300ಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ ಎಂಬ ನಿಯಮವನ್ನೂ ಕೂಡ ಅಳವಡಿಸಲಾಗಿದೆ. ಈ ಕುರಿತು ಮುಖ್ಯಮಂತ್ರಿ ನೇತೃತ್ವದಲ್ಲಿ ಕಳೆದ ಭಾನುವಾರದಂದು ನಡೆದ ಸಭೆಯ ಬಳಿಕ ರಾತ್ರಿ ಹತ್ತು ಗಂಟೆಯಿಂದ ಬೆಳಗ್ಗೆ ಐದು ಗಂಟೆಯವರೆಗೆ ಕರ್ಪ್ಯೂ ಜೊತೆಗೆ ಕೆಲವು ಮಾರ್ಗಸೂಚಿ ಪ್ರಕಟಿಸಲಾಗಿತ್ತು. ಇದರನ್ವಯ ರಾಜ್ಯದಲ್ಲಿ ಡಿ. 28ರಿಂದ ಜ. 07ರ ವರೆಗೆ ರಾತ್ರಿಯಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಅನಗತ್ಯ ಸುತ್ತಾಟ, ಜನ ಸೇರುವಿಕೆ, ಸಾರ್ವಜನಿಕ ಸ್ಥಳಗಳಲ್ಲಿನ ಕಾರ್ಯಕ್ರಮಗಳು, ಬಾರ್, ಪಬ್, ರೆಸ್ಟೋರೆಂಟ್ ಹಾಗೂ ಚಲನಚಿತ್ರ ಮಂದಿರ ಸೇರಿದಂತೆ ಅಗತ್ಯ ಸೇವೆಯಲ್ಲದ ಯಾವುದೇ ವಾಣಿಜ್ಯ ಚಟುವಟಿಕೆಗಳಿಗೂ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

Also Read  ಧರ್ಮಸ್ಥಳ ಸ್ನಾನಘಟ್ಟದ ಬಳಿ ಅಪರಿಚಿತ ಮಹಿಳೆಯರ ಮೃತದೇಹ ಪತ್ತೆ

 

error: Content is protected !!
Scroll to Top