ರಾಜ್ಯದಲ್ಲಿ ಮತ್ತೆ ಲಾಕ್ಡೌನ್…! ➤ ಮುನ್ನೆಚ್ಚರಿಕೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 11. ಸರಕಾರ ಜಾರಿಗೊಳಿಸಿರುವ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ವನ್ನು ಲೆಕ್ಕಿಸದೇ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯನ್ನು ನಡೆಸಿದೆ. ಈ ಹಿನ್ನೆಲೆ ರಾಜ್ಯದಾದ್ಯಂತ ಕೊರೋನಾ ಪ್ರಕರಣ ಹೆಚ್ಚಾದರೆ ಮತ್ತೆ ಕಂಪ್ಲೀಟ್ ಲಾಕ್ಡೌನ್ ಮಾಡುವ ಸಾಧ್ಯತೆ ಇದ್ದು, ಹೀಗಾದಲ್ಲಿ ಇದಕ್ಕೆ ಕಾಂಗ್ರೆಸ್ ಪಕ್ಷವೇ ನೇರ ಹೊಣೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.


ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾದರೂ ಕೊರೋನಾ ಪ್ರಕರಣ ಹೆಚ್ಚಾದರೆ ತಿಂಗಳುಗಳ ಕಾಲ ಲಾಕ್ ಡೌನ್ ಮಾಡಬೇಕಾಗುತ್ತದೆ. ಮತ್ತೆ ಹೀಗೆ ಆದಲ್ಲಿ ಅದಕ್ಕೆ ನಿಯಮ ಉಲ್ಲಂಘಿಸಿ ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ನೇರ ಹೊಣೆಯಾಗಲಿದೆ ಎಂದರು.

Also Read  ಉಡುಪಿ: ಬೈಕ್ ಮತ್ತು ಲಾರಿ ನಡುವೆ ಮುಖಾಮುಖಿ ಢಿಕ್ಕಿ ➤ ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲೇ ಮೃತ್ಯು..!                                                

 

error: Content is protected !!
Scroll to Top